ಬಿಜೆಪಿಯಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬಿಜೆಪಿ ಹೈಕಮಾಂಡ್

ದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ರಾಜ್ಯಸಭೆಗೆ ಬಿಜೆಪಿ ಹೈಕಮಾಂಡ್ 16 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಿಂದ ‘ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್’ಗೆ ಟಿಕೆಟ ನೀಡಲಾಗಿದೆ. ಕರ್ನಾಟಕದ ಎರಡು ರಾಜ್ಯಸಭಾ ಸ್ಥಾನಗಳ ಸಹಿತ 9 ರಾಜ್ಯಗಳ 16 ಸ್ಥಾನಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.

ಎರಡು ಸ್ಥಾನಗಳಿಗೆ ಬಿಜೆಪಿ, ಒಂದು ಸ್ಥಾನಗಳಿಗೆ ಕಾಂಗ್ರೆಸ್ ಫಿಕ್ಸ್ ಆಗಿದ್ದರೇ, ಮತ್ತೊಂದು ಸ್ಥಾನಕ್ಕಾಗಿ ಎರಡು ಪಕ್ಷಗಳ ದೋಸ್ತಿ ಅತ್ಯಗತ್ಯವಾಗಿದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಮೂರೂ ಪಕ್ಷಗಳಲ್ಲಿ ಯಾವುದೇ ಬಹುಮತವಿಲ್ಲ. ಒಂದು ಪಕ್ಷ ಮತ್ತೊಂದು ಪಕ್ಷವನ್ನ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೆಡಿಎಸ್ ಜೊತೆ ಬಿಜೆಪಿ ಕೈಜೋಡಿಸಲಿದೆಯಾ ? ಬಿಜೆಪಿಗೆ ಜೆಡಿಎಸ್ ಸಾಥ್ ನೀಡಲಿದೆಯಾ ? ಇಲ್ಲವೇ ಜೆಡಿಎಸ್ ನ್ನ ಕೈಪಡೆ ದೋಸ್ತಿ ಮಾಡಿಕೊಳ್ಳಲಿದೆಯಾ ? ಎನ್ನುವ ಚರ್ಚೆ ನಡೆಯುತ್ತಿದೆ.

ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಆಸಕ್ತಿ ತೋರಿದೆ. ಆದರೆ, ಯಾರು ಯಾವ ಪಕ್ಷದ ಜೊತೆ ಕೈಜೋಡಿಸುತ್ತಾರೆಂಬದು ಗೊತ್ತಾಗುತ್ತಿಲ್ಲ. ಅಲ್ಲದೇ ಒಂದು ಸ್ಥಾನ ಗೆಲ್ಲಲು ಜೆಡಿಎಸ್ 32 ಮತಗಳನ್ನ ಹೊಂದಿಕೆಯ ಕಸರತ್ತು ನಡೆಸುತ್ತಿದೆ.

About The Author