ಸಗರ ಗ್ರಾಮದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯ ಮೆಚ್ಚಿ,ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರು

ಶಹಾಪುರ : ತಾಲ್ಲೂಕಿನ ಸಗರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಶಾಸಕ ಶರಣಬಸಪ್ಪ ದರ್ಶನಾಪೂರ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ತೊರೆದು ಚಂದಪ್ಪ ಸೇರಿ, ಮಲ್ಲಿಕಾರ್ಜುನ್ ವಿರುಪಾಪೂರ,ಬನ್ನಪ್ಪಗೌಡ ಪೊಲೀಸ್ ಪಾಟೀಲ್,ರಫೀಕ್ ಸೇರಬಾವಿ,ಲಚಮಣ್ಣ ಊರಕಾಯಿ, ಹಾಗೂ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಬಿಜೆಪಿ ಪಕ್ಷ ಕೇವಲ ಅಭಿವೃದ್ಧಿಯ ನೆಪದಲ್ಲಿ ಸರ್ಕಾರದ ಹಾಗೂ ಸಾರ್ವಜನಿಕರ ಹಣ ಲೂಟಿ ಮಾಡುತ್ತಾ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆ ಆದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದರಿಂದ ಮತ್ತಷ್ಟು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡರು.

ಸಮಾರಂಭದ ವೇದಿಕೆ ಮೇಲೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಚಂದ್ರಶೇಖರ ಸಾಹು ಆರಬೋಳ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮರಿಗೌಡ ಪಾಟೀಲ ಹುಲಕಲ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಸನಗೌಡ ಮಾಲಿ ಪಾಟೀಲ್,ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ನಾಗನಗೌಡ ಸುಬೇದಾರ್,ಸಾಹಿತಿಗಳಾದ ಲಿಂಗಣ್ಣ ಪಡಶೆಟ್ಟಿ,ತಿಮ್ಮಯ್ಯ ಪುರ್ಲೆ,ಮಹಾದೇವಪ್ಪ ಸಾಲಿಮನಿ, ಮಾನಪ್ಪ ವಟಾರ್,ಅಶೋಕ್ ಕೂಡ್ಲೂರು,ಬಸವರಾಜ ಕನಗುಂಡ ಮಲ್ಲಣ್ಣ ವಮ್ಮಾ ಮತ್ತು ಇತರರು ಉಪಸ್ಥಿತರಿದ್ದರು.

About The Author