ಸಿದ್ದರಾಮಯ್ಯ 75-ಅಮೃತ ಮಹೋತ್ಸವ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಮ್.ಪಾಟೀಲ್

ಶಹಾಪುರ: ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆಯ ಅಮೃತ ಮಹೋತ್ಸವದ ಕಾರ್ಯಕಾರಿ ಸಮಿತಿಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಕೆಪಿಸಿಸಿ ವಕ್ತಾರರಾದ ಬಿ.ಎಮ್.ಪಾಟೀಲರನ್ನು ನೇಮಕ ಮಾಡಲಾಗಿದೆ ಎಂದು ಅಮೃತ ಮಹೋತ್ಸವದ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ರಾಯರೆಡ್ಡಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿ ಎಂ ಪಾಟೀಲರು ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ, ಉಪಚುನಾವಣೆಗಳಲ್ಲಿ ಪಕ್ಷದ ಪರ ವಕ್ತಾರರಾಗಿ ಕೆಲಸ ಮಾಡಿದ ಅನುಭವವಿದ್ದ ನಿಮಿತ್ತ ಸಿದ್ದರಾಮಯ್ಯನವರ 75ನೇ ಜನ್ಮ ದಿನೋತ್ಸವದ ಅಮೃತ ಮಹೋತ್ಸವವನ್ನು ಯಶಸ್ವಿಯಾಗಿ ನಿರ್ವಹಿಸುವರು ಎನ್ನುವ ಕಾರಣಕ್ಕೆ ಸಂಘಟನಾ ಕಾರ್ಯದರ್ಶಿಯ ಹುದ್ದೆಯನ್ನು ನೀಡಲಾಗಿದೆ.ತಕ್ಷಣದಿಂದಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

About The Author