ಯಾದಗಿರಿ ಕಾಂಗ್ರೆಸ್ ವೈದ್ಯ ಘಟಕದ ಅಧ್ಯಕ್ಷರಾಗಿ ಡಾ.ಕೃಷ್ಣಮೂರ್ತಿ ನೇಮಕ:ಶಾಸಕರ ಭೇಟಿ

ಶಹಾಪುರ:ಜಿಲ್ಲೆಯ ಕಾಂಗ್ರೆಸ್ ಪಕ್ಷದ ವೈದ್ಯ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಡಾ.ಕೃಷ್ಣಮೂರ್ತಿಯವರನ್ನು ನೇಮಕಮಾಡಿ ರಾಜ್ಯ ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಡಿಕೆ.ಶಿವಕುಮಾರ ಆದೇಶ ಹೊರಡಿಸಿದ್ದು,ಡಾ.ಕೃಷ್ಣಮೂರ್ತಿಯವರು ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಬಲವರ್ಧನೆಗೆ ಹೆಚ್ಚು ಒತ್ತುಕೊಟ್ಟು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬರುವಂತೆ ಶ್ರಮಿಸಬೇಕೆಂದು ವೈದ್ಯರಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಡಾ.ಬಸವರಾಜ ಇಜೇರಿಯವರು ಇದ್ದರು.

 

About The Author