ಶಹಾಪೂರ-ಸೆಪ್ಟೆಂಬರ್ 5 ರಂದು ಕಬಡ್ಡಿ ಟೂರ್ನಮೆಂಟ್

ಶಹಾಪುರ : ಆಧುನಿಕ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳು ಇತ್ತೀಚಿನ ಯುವಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ, ಗೌರಿ ಗಣೇಶ ಹಬ್ಬದ ಪ್ರಯುಕ್ತ ನಿಜಶರಣ ಅಂಬಿಗೇರ ಚೌಡಯ್ಯ ಯುವ ವೇದಿಕೆ ವತಿಯಿಂದ ಓಪನ್ ಕಬಡ್ಡಿ ಟೂರ್ನಮೆಂಟ್ ಸೆಪ್ಟೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಆನಂದ ಟೈಗರ್ ಪ್ರಕಟಣೆಗೆ ತಿಳಿಸಿದ್ದಾರೆ.

ಪಟ್ಟಣದ ಹಳೆ ಬಸ್ ನಿಲ್ದಾಣ ಎದುರುಗಡೆ ಇರುವ ಸರಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಉದ್ಘಾಟಿಸಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹೋತಪೇಟ ಕೈಲಾಸಾಶ್ರಮದ ಶಿವಲಿಂಗಶರಣರು ವಹಿಸಿಕೊಳ್ಳಲಿದ್ದಾರೆ. ಮಹಲ್ ರೋಜಾ ಮಲ್ಲಿಕಾರ್ಜುನ ದೇವರು ಉಪಸ್ಥಿತರಿರುವರು ಹನಮಂತ ರಾಯಗೌಡ ನಗರಸಭೆ ಅಧ್ಯಕ್ಷರು, ಪಿ.ಎಸ್.ಐ ಶ್ರೀನಿವಾಸ್ ಅಲ್ಲಾಪುರೆ, ಚನ್ನಯ್ಯ ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕ್ರೀಡಾಪ್ರೇಮಿಗಳ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

About The Author