ಕ್ಷೇತ್ರ ಶಿಕ್ಷಣಾಧಿಕಾರಿ ಕಟ್ಟಡ ನಿರ್ಮಾಣ ಕಾಮಗಾರಿ  ಪೂರ್ತಿ ಗೊಳಿಸಲು ಗದ್ದುಗೆ ಮನವಿ

ಶಹಾಪುರ:ಇಲ್ಲಿನ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಮತ್ತು ಗುರು ಭವನ ಕಟ್ಟಡ ಕಾಮಗಾರಿಗಳು ಅರ್ಧಕ್ಕೆ ನಿಂತು ಹಲವಾರು ವರ್ಷಗಳಾಗಿದ್ದು ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಕರವೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ಶರಣು ಬಿ ಗದ್ದುಗೆ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಮನವಿ ಮಾಡಿದರು. ಹ

ಹಳೆಯ ಕಟ್ಟಡದಲ್ಲಿ ಕಛೇರಿ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳು ಇಲ್ಲದೆ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಶಿಕ್ಷಣ ಅಧಿಕಾರಿಗಳು ಸರಕಾರ ಹಾಗೂ ಶಾಸಕರ ಗಮನಕ್ಕೆ ತರಬೇಕಿತ್ತು.ಇದು ನೋವಿನ ವಿಷಯವಾಗಿದ್ದು,ಅನೇಕ ಶಿಕ್ಷಕರ ಒತ್ತಾಯದ ಮೇರೆಗೆ ಕೂಡಲೇ ಇದರ ಬಗ್ಗೆ ಕ್ರಮ ವಹಿಸಬೇಕು.ಸಂಭಂದಪಟ್ಟ ಇಲಾಖಾಧಿಕಾರಿಗಳಿಗೆ ವಿಚಾರಿಸಿ ಕಾಮಗಾರಿ ಪೂರ್ತಿಗೊಳಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.ಶಾಸಕರು ಇದರ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು ಎಂದು ಹೇಳಿದರು.

About The Author