ಹಯ್ಯಳ ಬಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ : ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶರಣಬಸಪ್ಪಗೌಡ ದರ್ಶನಾಪುರ

ಯಾದಗಿರಿ : ಬೆಲೆ ಏರಿಕೆ, ಹಗರಣಗಳ ಸಾಧನೆಯೆ ರಾಜ್ಯ ಸರ್ಕಾರದ ಸಾಧನೆಯಾಗಿದೆ. ರಾಜ್ಯದ ಅಭಿವೃದ್ಧಿ ಕಡೆಗೆ ಗಮನಹರಿಸದ ಬಿಜೆಪಿಯವರು,ಡೀಸೆಲ್ ಮತ್ತು ಪೆಟ್ರೋಲ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಬಡ ಜನರ ಮೇಲೆ ಬರೆ ಎಳೆದಿದ್ದಾರೆ ಎಂದು ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯಾದಗಿರಿ ಕ್ಷೇತ್ರದ ಹಯ್ಯಳ ಬಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಹಯ್ಯಳ ಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಸರಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ. 40% ಪರ್ಸಂಟೇಜ್ ಸರಕಾರದ ವಿರುದ್ಧ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತ ಇಲ್ಲದಿದ್ದರೂ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ ಬಿಜೆಪಿ ಸರಕಾರ ಕಾಂಗ್ರೆಸನ ಸಿದ್ದರಾಮಯ್ಯನವರ ಸರಕಾರದಲ್ಲಿ ಹಗರಣ ನಡೆದಿಲ್ಲವೆ ಎಂದು ಹೇಳುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ತಮ್ಮದೇ ಆದ ಸರಕಾರವಿದೆ ತನಿಖೆ ನಡೆಸಲು ತಾಕತ್ತಿಲ್ಲವೇ ಎಂದು ಸರಕಾರಕ್ಕೆ ಸವಾಲು ಹಾಕಿದರು.

ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಕ್ಷೇತ್ರದಲ್ಲಿ ಹಲವಾರು ಜನರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ಮರಿಗೌಡ ಹುಲಕಲ್, ಚನ್ನಾರೆಡ್ಡಿ ತುನ್ನೂರ, ಭೀಮಣ್ಣ ಮೇಟಿ, ಶ್ರೀನಿವಾಸ ರೆಡ್ಡಿ ಕಂದಕೂರು, ವಿನೋದ್ ಪಾಟೀಲ್, ಬಸ್ಸುಗೌಡ ಬಿಳಾರ,ಜಹೀರ್ ಖಾನ್,ಸಿದ್ಲಿಂಗಪ್ಪ ಸಾಹು, ಮಲ್ಲಿಕಾರ್ಜುನ ಪೂಜಾರಿ,ಬಸ್ಸಣ್ಣ ಬಂಡಿ,ಮೌನೇಶ್ ಪೂಜಾರಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕಾಮಣ್ಣ ಗ್ರಾಮ ಪಂಚಾಯಿತಿ ಸದಸ್ಯರು,ಮರೇಪ್ಪ ಬಿಳಾರ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಪಾರ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಕೊಡುವ ಜವಾಬ್ದಾರಿಯನ್ನು ಶಾಸಕರಾದ ಶರಣಬಸಪ್ಪಗೌಡ ದರ್ಶನಪುರ ರವರಿಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ ! ತಮ್ಮ ಸ್ವಂತ ಶಹಾಪುರ ಕ್ಷೇತ್ರದ ಜೊತೆಗೆ ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಗೆಲುವಿಗಾಗಿ ಶರಣಬಸಪ್ಪ ಗೌಡ ದರ್ಶನಾಪುರ ರವರಿಗೆ ವಹಿಸಲಿಗಿದೆ !, ಹಯ್ಯಳ‌ ಬಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ !. ಕಾಂಗ್ರೆಸ್ ಹೈಕಮಾಂಡ್ ಶರಣಬಸಪ್ಪಗೌಡ ದರ್ಶನಾಪುರವರ ಗಮನಕ್ಕೆ ತಂದು ಯಾದಗಿರಿ ಕ್ಷೇತ್ರದ ಟಿಕೆಟ್ ಕೊಡುತ್ತದೆ ಎನ್ನುವ ಸುದ್ದಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರಿದಾಡುತ್ತಿದೆ !

 

About The Author