ಜ.12,13,14 ರಂದು ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ 

ಶಹಪುರ : ಜನವರಿ 12,13,14 ರಂದು ತಿಂತಣಿ ಬ್ರಿಜ್ ನಲ್ಲಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವು ನಡೆಯಲಿದ್ದು, ಸಮಾಜದ ಬಂಧುಗಳು ಹಿರಿಯರು ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳಿ ನಿರ್ದೇಶಕರಾದ ಶಾಂತಗೌಡ ನಾಗನಟಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
    ಕಾರ್ಯಕ್ರಮದಲ್ಲಿ ಕಾಗಿನೆಲೆ ಸಂಸ್ಥಾನ ಮಠದ ಹಾಲುಮತ ಸಮಾಜದ ಜಗದ್ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಹಾಗೂ ಪೂಜ್ಯರಾದ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಸೇರಿದಂತೆ  ಮಠಗಳ ಪೂಜ್ಯರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಹೆಚ್.ಎಮ್.ರೇವಣ್ಣ, ಸ್ಥಳೀಯ ಶಾಸಕರು ಸೇರಿದಂತೆ  ಸಮಾಜದ ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಹೇಳಿದರು.ಉಡಿತುಂಬುವ ಕಾರ್ಯಕ್ರಮ, ಟಗರಿನ ಕಾಳಗ, ಸಾಧಕರಿಗೆ ಪ್ರಶಸ್ತಿ ಪ್ರಧಾನ, ಎತ್ತುಗಳ ಭಾರ ಎಳೆಯುವ ಸ್ಪರ್ಧೆ, ಲಕ್ಷದೀಪೋತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

About The Author