ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಿಖೀಲ್ ಶಂಕರ್ ನೇಮಕ : ಹರ್ಷ ವ್ಯಕ್ತಪಡಿಸಿದ ಬಸವರಾಜ ಅತ್ತನೂರು

ಯಾದಗಿರಿ : ಕರ್ನಾಟಕ ರಾಜ್ಯ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಕಾಂಗ್ರೆಸ್ಸಿನ ಯುವ ಮುಖಂಡರು ಹಾಗೂ ಯಾದಗಿರಿ ಜಿಲ್ಲಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ಯಾದ ನಿಖೀಲ್ ವಿ. ಶಂಕರ್ ನೇಮಕವಾಗಿರುವುದು ಸಂತಸ ತಂದಿದೆ ಎಂದು ಯಾದಗಿರಿ ಜಿಲ್ಲಾ ಸಿದ್ದರಾಮಯ್ಯ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಬಸವರಾಜ ಅತ್ನೂರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಖಿಲ್ ಶಂಕರ್ ಯುವ ಮುಖಂಡರಾಗಿದ್ದು, ಯುವಕರ ಸ್ಪೂರ್ತಿಯಾಗಿದ್ದಾರೆ. ಪಕ್ಷದಲ್ಲಿ ಕಾಂಗ್ರೆಸ್ ಯುವ ಘಟಕದಲ್ಲಿ ಸಕ್ರಿಯರಾಗಿದ್ದು ಯಾದಗಿರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರ ಪಾತ್ರ ಪ್ರಮುಖವಾಗಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿರುವುದು ಇನ್ನೂ ಹೆಚ್ಚಿನ ಜವಾಬ್ದಾರಿ ಬಂದಂತಾಗಿದೆ. ಯಾದಗಿರಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾದ ನಿಖಿಲ್ ಶಂಕರ್ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರರು, ಯಾದಗಿರಿ ಭಾಗದ ಗಾಂಧಿ ಕುಟುಂಬದ ಆಪ್ತರಾದ ಕೊಲೂರು ಮಲ್ಲಪ್ಪಾಜಿ ಯವರ ಸಮಾಧಿಯನ್ನು ಸ್ಮಾರಕವಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ನಿಖಿಲ್ ಶಂಕರ್ ಸುಮಾರು 35 ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿ ಕೊಲೂರು ಮಲ್ಲಪ್ಪಾಜಿ ಪುತ್ತಳಿಯನ್ನು ನಿರ್ಮಿಸಿದ್ದು, ಅವರ ಸಮಾಧಿ ಸ್ಥಳವನ್ನು ಸ್ಮಾರಕ ಮಾಡುವಂತೆ ಶ್ರಮಿಸುತ್ತಿದ್ದಾರೆ. ಆದಷ್ಟು ಬೇಗನೆ ಅದನ್ನು ಲೋಕಾರ್ಪಣೆ ಮಾಡುವರು ಎಂದು ಬಸವರಾಜ ಅತ್ನೂರು ತಿಳಿಸಿದರು.

About The Author