ಶಾಸಕರ ವಿರುದ್ಧ ಅಸಮಾಧಾನ | ಬಿಜೆಪಿ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ ಮನವಿ !

ವಡಗೇರಾ : ಸ್ಥಳೀಯ ಶಾಸಕ ವೆಂಕಟ ರೆಡ್ಡಿ ಮುದ್ನಾಳ ಸ್ಥಳೀಯರನ್ನು ಕಡೆಗಣಿಸುತ್ತಿದ್ದು, ಆಡಳಿತದಲ್ಲಿ ಅವರ ಕುಟುಂಬಸ್ಥರ ಮೂಗು ತೂರಿಸುತ್ತಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಬಿಜೆಪಿ ಹೈಕಮಾಂಡ್ ನಾಯಕರಿಗೆ ಭೇಟಿ ಮಾಡಿ ವೆಂಕಟರೆಡ್ಡಿ ಯವರಿಗೆ ಬಿಜೆಪಿ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಕ್ಕಂ ಹೂಡಿದ ಬಿಜೆಪಿ ಮುಖಂಡರಾದ ಯಾದಗಿರಿ ಜಿಲ್ಲಾಧ್ಯಕ್ಷರಾದ ಶರಣು ಭೂಪಾಲರೆಡ್ಡಿ, ರೈತ ಮೋರ್ಚಾದ ಕಾರ್ಯದರ್ಶಿಗಳಾದ ಚಂದ್ರಶೇಖರ ಮಾಗನೂರು, ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಚೆನ್ನೂರು, ದೇವರಾಜ ನಾಯಕ ಸೇರಿದಂತೆ ಹಲವು ಮುಖಂಡರು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿ ಟಿ ರವಿ, ಕೇಂದ್ರ ಸಚಿವರಾದ ಪ್ರಹಲ್ಲಾ ಜೋಷಿ, ಬಿಜೆಪಿ ಉಸ್ತುವಾರಿಗಳಾದ ಅರುಣ ಕುಮಾರ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ !

ಶಾಸಕರಾದ ವೆಂಕಟರೆಡ್ಡಿ ಮುದ್ದಾಳ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ನಮ್ಮ ಮಾತಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷದಲ್ಲಿ ತಮ್ಮ ಕುಟುಂಬಸ್ಥರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಅವರನ್ನು ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ಕೊಡಬೇಕೆಂದು ಕೇಳಿಕೊಂಡರು. ನಮ್ಮಲ್ಲಿ ಯಾರಿಗಾದರೂ ಟಿಕೆಟ್ ಕೊಟ್ಟರೆ ಸಹಕರಿಸುವದಾಗಿ ತಿಳಿಸಿದರು!

ಇತ್ತ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವಪ್ಪ ಗೌಡ ರೋಟ್ನಡಗಿ ರವರನ್ನು ವೆಂಕಟರೆಡ್ಡಿ ಮುದ್ನಾಳ್ ಅವರು ಬಿಜೆಪಿ ಸೇರ್ಪಡೆ ಮಾಡಿಕೊಂಡು ಬಿಜೆಪಿ ಪಕ್ಷಕ್ಕೆ ಬಲತುಂಬುವ ಕೆಲಸ ಮಾಡುತ್ತಿದ್ದಾರೆ. ಅತ್ತ ಶಾಸಕ ವೆಂಕಟರೆಡ್ಡಿ ಮುದ್ನಾಳ್ ರವರಿಗೆ ಟಿಕೆಟ್ ನೀಡದಂತೆ ಬಿಜೆಪಿಯ ಪ್ರಬಲ ಮುಖಂಡರು ಒತ್ತಾಯಿಸುತ್ತಿದ್ದಾರೆ. ನಾಳೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಳ್ಳುತ್ತಿದೆ.ಯಾದಗಿರಿ ಕ್ಷೇತ್ರದ ಟಿಕೆಟ್ ಯಾರಿಗೆ ಲಭಿಸುತ್ತದೆ ಎಂದು ಕಾದು ನೋಡಬೇಕಿದೆ.

About The Author