ಶಹಾಪುರ: ಶಹಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೆಗ್ಗಣದೊಡ್ಡಿ ಮತ್ತು ತಿಪ್ಪನಟಗಿ ಗ್ರಾಮಕ್ಕೆ ಬಿಜೆಪಿಯ ನಿಯೋಜಿತ ಅಭ್ಯರ್ಥಿಯಾದ ಅಮೀನರೆಡ್ಡಿ ಯಾಳಗಿ ನೇತೃತ್ವದಲ್ಲಿ ಇಡೀ ಬಿಜೆಪಿಯ ತಂಡವೇ ಚುನಾವಣಾ ಪ್ರಚಾರ ಕೈಗೊಂಡಿತ್ತು.
ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅಮೀನ ರೆಡ್ಡಿ ಯಾಳಗಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಹಲವು ಮಹತ್ವದ ಜನಪರ ಕಾರ್ಯಗಳನ್ನು ಮಾಡಿದೆ. ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಕಡೆಗಣಿಸಿದ ಮೀಸಲಾತಿಯನ್ನು ಜಾರಿಗೆ ತಂದಿದೆ. ಬಡವರ ಒಳಿತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಹಪುರದಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಕೊಡುವಂತೆ ಮತದಾರರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜುಗೌಡ ಪಾಟೀಲ ಉಕ್ಕಿನಾಳ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗುರುಕಾಮಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕಂದಕೂರ, ಸಿದ್ರಾಮಪ್ಪ ಕಾಡಂಗೇರಾ, ಭೀಮರಾಯ ಭಂಡಾರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.