ವಿವಿಧ ಗ್ರಾಮಗಳಲ್ಲಿ ಬಿಜೆಪಿ ಭರ್ಜರಿ ಪ್ರಚಾರ :  ಶಹಪೂರ ಕ್ಷೇತ್ರದ ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯಕ್ಕೆ ಒತ್ತು : ಅಮೀನ್ ರೆಡ್ಡಿ

ಶಹಪುರ : ಕ್ಷೇತ್ರದಲ್ಲಿನ ಪ್ರತಿ ಗ್ರಾಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅಮೀನ್ ರೆಡ್ಡಿ ಯಾಳಗಿ ಹೇಳಿದರು. ಕ್ಷೇತ್ರದ ಸಲಾದಪುರ ಇಂಗಳಗಿ ಅಣಬಿ ಬೇವಿನಹಳ್ಳಿ, ಮಡ್ನಾಳ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಡಬಲ್ ಇಂಜಿನ್ ಸರಕಾರವಿದ್ದರೆ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಡಾ. ಚಂದ್ರಶೇಖರ ಸುಬೇದಾರ, ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜುಗೌಡ ಉಕ್ಕಿನಾಳ,  ಹಿರಿಯ ಮುಖಂಡರಾದ ಬಸವರಾಜಪ್ಪಗೌಡ ವಿಭೂತಿಹಳ್ಳಿ, ರಾಜಶೇಖರ ಗೂಗಲ್, ಮಲ್ಲಿಕಾರ್ಜುನ ಕಂದಕೂರ, ಅಡಿವೆಪ್ಪ ಜಾಕಾ, ಸಮುದಾಯದ ಮುಖಂಡರು, ಹಿರಿಯರು ಹಾಗೂ ಸಾರ್ವಜನಿಕರು ಮತ್ತು ಕಾರ್ಯಕರ್ತ  ಉಪಸ್ಥಿತರಿದ್ದರು.

About The Author