ನಾಳೆ ಶಹಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ | ರೋಡ್ ಶೋ ದೊಂದಿಗೆ ಬಿಜೆಪಿ ಅಭ್ಯರ್ಥಿ ಅಮ್ಮಿನರೆಡ್ಡಿ ಪರ ಮತಯಾಚನೆ

ಶಹಪುರ : ನಾಳೆ ಶಹಾಪೂರ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚುನಾವಣಾ ಪ್ರಚಾರ ನಿಮಿತ್ತ ಶಹಾಪುರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿಯಾದ ಅಮ್ಮಿನ ರೆಡ್ಡಿ ಯಾಳಗಿ ತಿಳಿಸಿದರು.ಶುಕ್ರವಾರ ಮಧ್ಯಾಹ್ನ 12-45 ರಿಂದ 2-45 ರವರೆಗೆ ನಗರದ ಚರ ಬಸವೇಶ್ವರ ಕಮಾನಿನಿಂದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಮೂಲಕ ನಡೆಯುವ ರೋಡ್ ಶೋ ಪ್ರಚಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡು ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕರನ್ನು  ಉದ್ದೇಶಿಸಿ ಮಾತನಾಡುವರು ಎಂದು ತಿಳಿಸಿದರು.

      ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ, ಸಚಿವರಾದ ಅಶ್ವತ್ ನಾರಾಯಣ, ಸಂಸತ್ ಸದಸ್ಯರಾದ ರಾಜಾ ಅಂಬರೀಶ ನಾಯಕ, ಶಾಸಕರಾದ ರಾಜುಗೌಡ ಸೇರಿದಂತೆ ಹಲವು ಮುಖಂಡರು ರೋಡ್ ಶೋ ದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
     ನಂತರ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಶರಣುಭೂಪಾರೆಡ್ಡಿ, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಪಕ್ಷವು ನಿರಂತರ ಸಂಘಟನೆ ಐದು ವರ್ಷಗಳಿಂದ ಮಾಡಿಕೊಂಡು ಬಂದಿದೆ, ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಮಹಾ ಪ್ರಚಾರ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಶಹಪುರದಲ್ಲಿ ಜಾರ್ಖಂಡನ ಶಾಸಕರಾದ ಅನಂತ ಹೋಜಾ ರವರ ನೇತೃತ್ವದಲ್ಲಿ ಮಹಾಪ್ರಚಾರ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕೆಂಭಾವಿ ಮತ್ತು ಶಹಪುರದಲ್ಲಿ ಬೈಕ್ ರ್ಯಲಿ ಆಯೋಜನೆ ಮಾಡಿದ್ದೇವೆ ಎಂದರು.
ಬಿಜೆಪಿ ಪಕ್ಷ ರಾಜ್ಯದಲ್ಲಿ 25 ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿ ಬಗ್ಗೆ ನೀಲನಕ್ಷೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದೆ. ನಾವು ಅಧಿಕಾರದ ಹಿಂದೆ ಬಿದ್ದವರಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಅಧಿಕಾರದ ಹಿಂದೆ ಬಿದ್ದವರು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
       ಬಿಜೆಪಿ ಹಿರಿಯ ಮುಖಂಡರಾದ ಡಾ. ಚಂದ್ರಶೇಖರ ಸುಬೇದಾರ, ತಾಲೂಕು ಮಂಡಲ ಅಧ್ಯಕ್ಷರಾದ ರಾಜುಗೌಡ ಉಕ್ಕಿನಾಳ,ಶಿವರಾಜ ದೇಶಮುಖ್,  ಮಲ್ಲಿಕಾರ್ಜುನ ಚಿಲ್ಲಾಳ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಕಂದಕೂರ, ಪ್ರಧಾನ ಕಾರ್ಯದರ್ಶಿ ಗುರು ಕಾಮ, ಅಡಿವೆಪ್ಪ ಜಾಕಾ, ಮರೆಪ್ಪ, ಸೇರಿದಂತೆ ಇತರರು ಇದ್ದರು.

About The Author