ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ಸಿದ್ದರಾಮಯ್ಯ ಬ್ರಿಗೇಡ್ ಆಗ್ರಹ

ಯಾದಗಿರಿ : ಅಹಿಂದ ನಾಯಕರಾದ  ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಸಿಎಂ ಮಾಡುವಂತೆ ಯಾದಗಿರಿ ಸಿದ್ದರಾಮಯ್ಯ ಬ್ರಿಗೇಡ್ ಜಿಲ್ಲಾಧ್ಯಕ್ಷರಾದ ಬಸವರಾಜ ಅತ್ನೂರು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಸಿದ್ದರಾಮಯ್ಯನವರಿಗೆ ಮತಗಳನ್ನು ಕ್ರೋಡೀಕರಿಸುವ ವರ್ಚಸ್ಸಿದೆ
ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಕಾರಣಕ್ಕೆ ಕಾಂಗ್ರೆಸ್ಸಿಗೆ ಮತ ಹಾಕಿದ್ದೇವೆ ಎಂದು ಹೇಳಿದರು.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಹಲವಾರು ಸಮಾಜದವರು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಆಶಿಸುತ್ತಿದ್ದಾರೆ.ಐದು ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿದ್ದಾರೆ.ಅವರ ಪರ ರಾಜ್ಯಾದ್ಯಂತ ಜನಬಲವಿದೆ.2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎನ್ನುವ ನಂಬಿಕೆ ಇದೆ.
ಯಾದಗಿರಿ ಕ್ಷೇತ್ರದಲ್ಲಿ ಇಡೀ ಕುರುಬ ಸಮುದಾಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮತ ಹಾಕಿದ್ದಾರೆ. ಅದನ್ನು ಕಾಂಗ್ರೆಸ್ ಹೈಕಮಾಂಡ್ ಮರೆಯಬಾರದು. ರಾಜ್ಯದ ಮಾಸ್ ಲೀಡರ್ಗಳಲ್ಲಿ ದೇವೇಗೌಡ ಯಡಿಯೂರಪ್ಪ ಸಿದ್ದರಾಮಯ್ಯನವರು ಕೂಡ ಒಬ್ಬರು. ಸಿದ್ದರಾಮಯ್ಯನವರಿಗೆ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲ. ಯಾವುದೇ ನ್ಯಾಯಾಲಯದ ಕಟಕಟೆಗೆ ಹತ್ತಿದವರಲ್ಲ.ಸಿದ್ದರಾಮಯ್ಯನವರ ಪರ ಇಡಿ ಕುರುಬ ಸಮುದಾಯವಿದೆ ಎಂದರು.

About The Author