ಸಮರ್ಥ ಆಡಳಿತಗಾರನಿಗೆ ಸಿಗುವುದೇ ಸಚಿವ ಸ್ಥಾನ

ಬಸವರಾಜ ಕರೆಗಾರ
*****
ಶಹಾಪುರ : ಐದು ವರ್ಷಗಳ ಕಾಲ ವಿರೋಧ ಪಕ್ಷದಲ್ಲಿದ್ದು ಶಹಪುರ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸೈ ಎನಿಸಿಕೊಂಡ ಶಾಸಕರಾದ ಶರಣಬಸಪ್ಪ ದರ್ಶನಾಪೂರ ಅವರಿಗೆ ಪ್ರಸ್ತುತ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂದು ಕ್ಷೇತ್ರದ ಜನತೆ ಕಾತುರದಿಂದ ಕಾದು ನೋಡುತ್ತಿದ್ದಾರೆ.
***
ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ
 ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಶಾಸಕರು ಮಾಡಿದ್ದಾರೆ. ಪ್ರತಿ ಗ್ರಾಮಗಳಿಗೆ ಭೇಟಿಕೊಟ್ಟು ಕುಡಿಯುವ ನೀರು ಗ್ರಾಮಗಳ ಮೂಲಭೂತ ಸೌಕರ್ಯವನ್ನು ಒದಗಿಸಿ ಕೊಡುವಲ್ಲಿ ಸತತ ಪ್ರಯತ್ನಪಟ್ಟಿದ್ದಾರೆ. ಪ್ರಸ್ತುತ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ಭರವಸೆಯಲ್ಲಿ ಜಿಲ್ಲೆಯ ಜನರು ಕಾತುರರಾಗಿದ್ದಾರೆ.
***
2018ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದಾಗ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದ ಶಾಸಕರಿಗೆ ಸಚಿವ ಸ್ಥಾನ ಸಿಗಲಿಲ್ಲ. 2023ರಲ್ಲಿ ಪ್ರಸ್ತುತ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಸಚಿವರಾಗಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿಯೇ ಅಪಾರ ಅನುಭವವುಳ್ಳ ಶಾಸಕರೆಂದರೆ ಶರಣಬಸಪ್ಪಗೌಡ ದರ್ಶನಪುರವರು.
***
ರಾಜ್ಯದ ಎಲ್ಲಾ ಇಲಾಖೆಗಳ ಅನುಭವ ಅವರಿಗಿದೆ. ಹಣಕಾಸಿನ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಆದ್ದರಿಂದ ಸಿದ್ದರಾಮಯ್ಯನವರು ಪ್ರಾದೇಶಿಕವಾರು ಜಿಲ್ಲಾವಾರು ಸಚಿವ ಸಂಪುಟದಲ್ಲಿ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಲೇಬೇಕಿದೆ. ಪ್ರತಿ ಬಾರಿಯೂ ಯಾದಗಿರಿ ಜಿಲ್ಲೆ ಸಚಿವ ಸ್ಥಾನ ವಂಚಿತವಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಮೂರು ಜನ ಕಾಂಗ್ರೆಸ್ ಶಾಸಕರನ್ನು ಜಿಲ್ಲೆಯಿಂದ ಮತದಾರರು ಆಯ್ಕೆ ಮಾಡಿ ಕಳಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಇದನ್ನು ಪರಿಗಣಿಸಿ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕ್ಷೇತ್ರದ ಜನರ ಆಗ್ರಹಿಸಿದ್ದಾರೆ.

About The Author