ತಡಿಬಿಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಶಾಸಕರಿಗೆ ಮನವಿ

ವಡಗೇರ : ತಡಿಬಿಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟುಹೋಗಿದ್ದು ಅದನ್ನು ಬಳಸದೆ ದುರಸ್ತಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದ್ದು ಅದನ್ನು ಪುನಃ ಆರಂಭಿಸಿ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿ ಕೊಡಬೇಕೆಂದು ಗ್ರಾಮದ ಮುಖಂಡರಾದ ಭಾಗಣ್ಣ ತಡಿಬಿಡಿ ಸೇರಿದಂತೆ ಇತರರು ಶಾಸಕರಾದ ಚೆನ್ನಾರೆಡ್ಡಿ ತುನ್ನೂರವರಿಗೆ ಮನವಿಪತ್ರ ಸಲ್ಲಿಸಿ ಮನವಿ ಮಾಡಿದರು.

ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ವಿಜೇತರಾದ ನಂತರ ತಡಿಬಿಡಿ ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಗೌರವದೊಂದಿಗೆ ಅಭಿನಂದನೆ ಮತ್ತು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಿಗೆ ಮನವಿ ಮಾಡಿದ ಗ್ರಾಮಸ್ಥರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ ಕೆಲವೇ ದಿನಗಳ ನಂತರ ಕೆಟ್ಟು ಹೋಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೂ ತಂದರೂ ನಿರ್ಲಕ್ಷ ವಹಿಸಿದ್ದಾರೆ. ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.

About The Author