ವಿರುಪಾಕ್ಷಿಗೌಡ ಪಾಟೀಲರಿಗೆ ತಾಲೂಕು ವರದಿಗಾರ ಪ್ರಶಸ್ತಿಗೆ ಆಯ್ಕೆ

ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ  ಕಳೆದ ಹಲವಾರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಗಣಿನಾಡು ದಿನಪತ್ರಿಕೆಯ ವರದಿಗಾರ ವಿರುಪಾಕ್ಷಗೌಡ ಪಾಟೀಲರಿಗೆ ಕರ್ನಾಟಕ ಪ್ರೆಸ್  ಕ್ಲಬ್ ಕೌನ್ಸಿಲ್ 2023ನೇ ಸಾಲಿನ ಅತ್ಯುತ್ತಮ ತಾಲೂಕು ವರದಿಗಾರ ಪ್ರಶಸ್ತಿ ನೀಡಿದೆ. ಅಕ್ಟೋಬರ್ 13 ರಂದು ಸಿರವಾರ ತಾಲೂಕಿನ ಸೆಂಟ್ರಲ್ ಮೆಥೋಡೀಸ್ ಚರ್ಚ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಕರ್ನಾಟಕ ಪ್ರೆಸ್  ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಮಾರುತಿ ಬಡಿಗೇರ ತಿಳಿದವರು.
 ಸಿರವಾರ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಲ್ಲಿ ಸಕ್ರಿಯ ಜಿಲ್ಲಾ ಕಾರ್ಯದರ್ಶಿಯಾಗಿ ಮತ್ತು ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ಜಿಲ್ಲಾ ಸಂಚಾಲಕರಾಗಿ ಹಲವಾರು ಕೆಲಸ ನಿರ್ವಹಿಸಿದ್ದಾರೆ. ರಾಜಕೀಯ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಮತ್ತು ಜ್ವಲಂತ  ಸಮಸ್ಯೆಗಳ ಕುರಿತು ಸಾಕಷ್ಟು ವರದಿಗಳನ್ನು ಮಾಡಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ವತಿಯಿಂದ ನೀಡಲಾಗುವ ಪ್ರಶಸ್ತಿಯು ಮೆಡಲ್ ಹಾಗೂ ಪ್ರಶಸ್ತಿಯನ್ನು ಪತ್ರಿಕೋದ್ಯಮಕ್ಕೆ ನೀಡಿದ ಸೇವೆಗಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

About The Author