ವಾರಬಂಧಿ ರದ್ದತಿಗೆ ಸಿಎಮ್ ಸ್ಪಂದನೆ | ಸಂಕಷ್ಟದಲ್ಲಿರುವ ರೈತರಿಗೆ ಸಿಹಿ ಸುದ್ದಿ ನೀಡಿದ ಸಚಿವ ದರ್ಶನಾಪುರ

ಶಹಾಪುರ : ಬಸವಸಾಗರ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಬೆಳೆಗಳು ನೀರಿಲ್ಲದೆ ಕಮರುತ್ತಿವೆ. ರೈತರು ಸಂಕಷ್ಟಕ್ಕೀಡಾಗಿದ್ದು, ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿನ ಜೆಬಿಸಿ, ಎಂಬಿಎ, ಎಸ್ಬಿಸಿ ಹಾಗೂ ಮಲ್ಲಾಬಾದ ಲಿಫ್ಟ್ 1.2.3, ಕಾಲುವೆಗಳ ಮುಖಾಂತರ ಅ.28 ರಿಂದ ನ.4 ರವರೆಗಿರುವ ವಾರ ಬಂಧಿಯನ್ನು ರದ್ದು ಪಡಿಸಿ 28 ದಿನಗಳವರೆಗೆ ಸತತ ನೀರು ಹರಿಸಬೇಕು ಎಂದು ಸಣ್ಣ ಕೈಗಾರಿಕೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಇಂದು ಸಿಎಂ.ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಬೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದರು.

*****

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಾವರಿ ಸಲಹಾಸಮಿತಿಯ ಅಧ್ಯಕ್ಷರಾದ ಆರ ಬಿ ತಿಮ್ಮಾಪುರರನ್ನು ಸಂಪರ್ಕಿಸಿ ಮಾತನಾಡಿದ ಸಿದ್ದರಾಮಯ್ಯನವರು ಮಾಹಿತಿ ಪಡೆದರು. ಸತತ ನೀರು ಹರಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ   ವಾರ ಬಂಧಿ ರದ್ದುಗೊಳಿಸಿ ಕಾಲುವೆಗೆ ನೀರು ಹರಿಸಲು ಮುಖ್ಯಮಂತ್ರಿ ಆದೇಶಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಸಲಹಾ ಸಮಿತಿ ಅಧ್ಯಕ್ಷರಾದ ಆರ್ ಬಿ ತಿಮ್ಮಾಪುರ ಅವರನ್ನು ಸಚಿವ ದರ್ಶನಾಪುರ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷರ ಡಾ. ಅಜಯ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಭಾಗದ ರೈತರು ಸಮಸ್ಯೆಗಳನ್ನರಿತ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರೈತರು ಸಮಸ್ಯೆ,ರೈತರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ರೈತರು ಸಚಿವ ದರ್ಶನಾಪೂರ ಅವರನ್ನು ಅಭಿನಂದಿಸಿದ್ದಾರೆ.

 

 

 

About The Author