yadagiri ವಡಗೇರಾ : ತಾಲೂಕು ಕೊಂಕಲ್ ವಲಯ ಕನ್ನಡ ಸಾಹಿತ್ಯ ಪರಿಷತ್ ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ದಿನಾಂಕ ನವಂಬರ್ 5ರಂದು ಭಾನುವಾರ ಬೆಳಗ್ಗೆ 10:30 ಕ್ಕೆ ಕೊಂಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಕೊಂಕಲ ವಲಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಕಾವಲಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷ ಸಂಗಮ ಶರಣಪ್ಪ ವಹಿಸಲಿದ್ದು, ಕರ್ನಾಟಕ ಧ್ವಜಾರೋಹಣವನ್ನು ಮಲ್ಲಿಕಾರ್ಜುನ ಕಾವಲಿ ಕೊಂಕಲ ವಲಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ನೆರವೇರಿಸುವರು. ಕನ್ನಡಾಂಬೆ ಮೆರವಣಿಗೆಗೆ ಚಾಲನೆಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಬಸವರಾಜ ಪಾಟೀಲ್ ಕೋದಂಡ ನೆರವೇರಿಸುವರು. ಕಾರ್ಯಕ್ರಮ ಉದ್ಘಾಟನೆಯನ್ನು ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ನೆರವೇರಿಸುವರು. ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಡಾ. ಎಸ್ ಎಸ್ ಗುಬ್ಬಿ ಮಾಡುವರು. ಗೌರವ ಅಧ್ಯಕ್ಷತೆಯನ್ನು ಪ್ರೊ. ವೆಂಕಣ್ಣ ಡೊಣ್ಣೆಗೌಡ ವಹಿಸಿಕೊಳ್ಳುವರು. ಕವಿಗೋಷ್ಠಿ ಅಧ್ಯಕ್ಷತೆಯನ್ನು ಉಪೇಂದ್ರ ವಠಾರ ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಕವಿ ಸಾಹಿತಿಗಳು ಕಲಾವಿದರು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.