ಬಸ್ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಜಾಲಿ ಗಿಡ ತೆರವುಗೊಳಿಸಿದ ವಿನೋದಗೌಡ ದೋರನಹಳ್ಳಿ 

Yadagiri ವಡಗೇರಾ : ಕಳೆದ ಮೂರು ದಿನಗಳ ಹಿಂದೆ ವಡಗೇರಾ ತಾಲೂಕಿನ ಶಿವಪೂರ ಗ್ರಾಮದ ಹತ್ತಿರ ಸಾರಿಗೆ ಸಂಸ್ಥೆಯ ಬಸ್ ಅಪಘಾತದಲ್ಲಿ ಶಿವಪುರ ಗ್ರಾಮದ ಸಾಬಣ್ಣ ಹಾಗೂ ಆತನ ಇಬ್ಬರು ಮಕ್ಕಳು ಮೃತಪಟ್ಟಿದ್ದು ಗಮನಕ್ಕೆ ಬಂದಿದ್ದನ್ನು ಅರಿತ  ದೋರನಹಳ್ಳಿ ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ವಿನೋದಗೌಡ ದೋರನಹಳ್ಳಿ ರವರು ಶಿವಪೂರ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು, ಸ್ವಂತ ಖರ್ಚಿನಿಂದ ಶಿವಪುರದಿಂದ ಸುಮಾರು ನಾಲ್ಕು ಕಿಲೋಮೀಟರ ವರೆಗೆ ಜಾಲಿ ಗಿಡಗಳನ್ನು ತೆರಗೊಳಿಸಿದರು.
  ಸಂಬಂಧಪಟ್ಟ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿನ ರಸ್ತೆಗಳು ಸಂಪೂರ್ಣ ಜಾಲಿ ಗಿಡಗಳಿಂದ ಕೂಡಿವೆ.ಅವುಗಳನ್ನು ತೆರವುಗೊಳಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಹೇಳಿದರು.ಈ ಕುರಿತು ಸ್ಥಳೀಯ ಶಾಸಕರು ಹಾಗೂ   ಉಸ್ತುವಾರಿ ಸಚಿವರ ಗಮನಕ್ಕೆ ತಂದು  ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಿಸುವುದರ ಜೊತೆಗೆ ಸ್ಥಳೀಯವಾಗಿ ಆ ಮಹಿಳೆಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಹಾಗೂ ಕಾರ್ಯಕರ್ತರು ಇನ್ನಿತರರು ಇದ್ದರು.

About The Author