ಎರಡನೇ ಬಾರಿಗೆ ಆಶ್ರಯ ಸಮಿತಿ ಅಧ್ಯಕ್ಷರಾಗಿ ವಸಂತಕುಮಾರ ಸುರಪುರಕರ್ ನೇಮಕ

ಶಹಪುರ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ನಿರ್ದೇಶನದ ಮೇರೆಗೆ ಶಹಪೂರು ನಗರ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ವಸಂತಕುಮಾರ/ಮಲ್ಲಪ್ಪ ಸುರಪುರಕರ್ ಅವರನ್ನು ನೇಮಕ ಮಾಡಿ ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ. ವಸಂತಕುಮಾರ ಅಧ್ಯಕ್ಷರಾಗುತ್ತಿರುವುದು ಇದು ಎರಡನೇ ಬಾರಿಗೆ. ಈ ಮೊದಲು ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದರು.

ಎರಡನೇ ಬಾರಿಗೆ ವಸಂತಕುಮಾರ ಸುರಪುರಕರ್ ನಗರ ಆಶ್ರಯ ಸಮಿತಿ ಅಧ್ಯಕ್ಷರಾಗಿರುವುದು ಸಂತಸ ತಂದಿದೆ. ಸದಾ ಸಚಿವರ ಕಾರ್ಯದಲ್ಲಿ ಮತ್ತು ಅವರ ಮಾರ್ಗದರ್ಶನದಲ್ಲಿ ಪಕ್ಷದ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ವ್ಯಕ್ತಿ ವಸಂತಕುಮಾರ ಎಂದು ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರಾದ ವೆಂಕಟೇಶ ಆಲೂರು ಅಭಿನಂದನೆ ಸಲ್ಲಿಸಿದ್ದಾರೆ.ಬಾಪುಗೌಡ ದರ್ಶನಾಪುರ ಅಭಿಮಾನಿ ಬಳಗ ಹಾಗೂ ಶರಣಬಸಪ್ಪಗೌಡ ದರ್ಶನಾಪುರ ಅಭಿಮಾನಿ ಬಳಗ ಹಾಗೂ ಪರಿಶಿಷ್ಟ ಜಾತಿ ಘಟಕದ ಯಾದಗಿರಿ ಜಿಲ್ಲಾ ಮಾಧ್ಯಮ ವಕ್ತಾರರಾದ ಚಂದ್ರಶೇಖರ ಕಟ್ಟಿಮನಿ ಮತ್ತು ಸಿದ್ದರಾಮಯ್ಯ ಬ್ರಿಗೇಡ್ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಅತ್ನೂರು ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

About The Author