ರಾಯಪ್ಪಗೌಡರಿಗೆ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಆಯ್ಕೆ

yadgiri.ಶಹಾಪುರ : ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ರಾಜ್ಯಮಟ್ಟದ ಪ್ರತಿಷ್ಠಿತ ಕನ್ನಡ ವಿಕಾಸ ರತ್ನ ಪ್ರಶಸ್ತಿಯನ್ನು ಶಹಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ರಾಯಪ್ಪಗೌಡ ಹುಡೇದರವರಿಗೆ  ನೀಡಲಾಗಿದ್ದು,ಜಿ. 30-11-2023ರ ಗುರುವಾರ ಮೈಸೂರು ನಗರದ ಹುಣಸೂರು ರಸ್ತೆಯಲ್ಲಿರುವ ರಂಗಮಂದಿರದಲ್ಲಿ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಸಂಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಮಾಜ ಸೇವೆ, ನೌಕರರಿಗೆ ಇವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು

About The Author