ಸಂತ ಕನಕದಾಸ ಜಯಂತಿ ಪೂರ್ವಭಾವಿ ಸಭೆ

ಶಹಪುರ : ನವೆಂಬರ್ 30ರಂದು ಸಂತ ಶ್ರೇಷ್ಠ ಕನಕದಾಸ ಜಯಂತಿ ನಿಮಿತ್ತ ತಹಶೀಲ್ದಾರರು ನವಂಬರ್ 22 ರಂದು ತಹಶೀಲ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆದಿದ್ದು,ಕುರುಬ ಸಮಾಜದ ಎಲ್ಲಾ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಡಾ.ಭೀಮಣ್ಣ ಭೇಟಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಶರಬಣ್ಣ ರಸ್ತಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.ಪೂರ್ವಭಾವಿ ಸಭೆಗೆ ಸಮಾಜದ ಹಿರಿಯ ಮುಖಂಡರು,ಸಮಾಜದ ಇತರ ಸಂಘಟನೆಯ ಮುಖಂಡರು ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕೆಂದು ತಹಶೀಲ್ದಾರರು ತಿಳಿಸಿದ್ದಾರೆ ಎಂದು ಹೇಳಿದರು.

About The Author