ಸರ್ವಾಂಗೀಣ ಅಭಿವೃದ್ಧಿಗೆ ಡಾ. ಅಂಬೇಡ್ಕರ್ ಅವರ ಚಿಂತನೆಗಳು ಪೂರಕ

ಶಹಾಪುರ: ಪ್ರಬುದ್ಧ ಮಾನವಾತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಪರಿವರ್ತನೆಯ ಚಿಂತನೆಗಳಲ್ಲಿ ಸರ್ವರ ಬೆಳವಣಿಗೆಯಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಿದೆ. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಶೈಕ್ಷಣಿಕ ಸಾಧನೆಯ ಮೂಲಕ ಉನ್ನತ ಸ್ಥಾನಮಾನಗಳನ್ನು ಹೊಂದಲು ಸಂವಿಧಾನದ ಮೂಲಕ ಎಲ್ಲಾ ಅವಕಾಶಗಳನ್ನು ಡಾ. ಅಂಬೇಡ್ಕರ್ ಅವರು ಕಲ್ಪಿಸಿಕೊಟ್ಟಿದ್ದಾರೆ. ಕಲಬುರ್ಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತತೆ)ದ ಇತಿಹಾಸ ಸಹಪ್ರಾಧ್ಯಾಪಕ ಡಾ. ವಿಜಯಕುಮಾರ ಸಾಲಿಮನಿ ಅವರು ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ೨೦೨೩-೨೪ನೇ ಸಾಲಿನ ಪಠ್ಯೆ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ವ್ಯರ್ಥ ಕಾಲಹರಣ ಮಾಡದೆ ಆಳವಾದ ಅಧ್ಯಯನದಲ್ಲಿ ತೊಡಗಿಸಿಕೊಂಡ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಲಬುರ್ಗಿಯ ಸರ್ಕಾರಿ ಮಹಾವಿದ್ಯಾಲಯದ ಪರೀಕ್ಷಾ ನಿಯಂತ್ರಕರಾದ ಡಾ. ಟಿ.ವಿ. ಅಡಿವೇಶ ಅವರು ಮಾತನಾಡಿ ಕಠಿಣ ಪರಿಶ್ರಮ, ನಿರಂತರ ಪ್ರಯತ್ನ, ಶ್ರದ್ಧೆಯ ಓದು, ಸಾಧನೆಯ ಛಲದಿಂದ ವಿದ್ಯಾರ್ಥಿಗಳು ಉನ್ನತ್ತವಾದುದ್ದನ್ನು ಸಾಧಿಸಲು ಸಾಧ್ಯವಾಗುತ್ತದೆ ವಿದ್ಯೆಯೊಂದಿಗೆ ಸದುವಿನಯ, ಸೌಜನ್ಯತೆ, ಗುರು ಹಿರಿಯರಿಗೆ ಗೌರವ ಮುಂತಾದ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಒಳ್ಳೆಯ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹಲವಾರು ಸಾಧಕರ ನಿದರ್ಶನಗಳ ಮೂಲಕ ತಿಳಿಸಿಕೊಟ್ಟರು.ಯಾದಗಿರಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರ ಸಂಘದ ಅಧ್ಯಕ್ಷ ಶ್ರೀಶೈಲ ಹೊಸಮನಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸಂಗಪ್ಪ ಎಸ್. ರಾಂಪುರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಚಾಲಕ ಡಾ. ಹಯ್ಯಾಳಪ್ಪ ಸುರಪುರಕರ್ ಅವರು ಪ್ರಾಸ್ತಾವಿಕ ಮಾತನಾಡಿದರು. ಎನ್.ಎಸ್.ಎಸ್. ಅಧಿಕಾರಿ ಡಾ. ಶಂಕ್ರಮ್ಮ ಪಾಟೀಲ ವಾರ್ಷಿಕ ವರದಿ ಮಂಡಿಸಿದರು. ನಿವೃತ್ತರಾದ ವಾಣಿಜ್ಯಶಾಸ್ತç ಉಪನ್ಯಾಸಕ ಭೀಮರಾಯ ಹೊಸಮನಿ ಅವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಪೂಜಾರಿ, ಹಿರಿಯ ಅಧ್ಯಾಪಕರಾದ ಪ್ರೊ. ಸಿದ್ಧಪ್ಪ ದಿಗ್ಗಿ, ಪ್ರೊ ಯಂಕಯ್ಯ, ಪ್ರೊ. ಭೀಮಣ್ಣ ಮಾಲಿಪಾಟೀಲ ಮತ್ತು ವಿವಿಧ ಘಟಕಗಳ ಸಂಚಾಲಕರಾದ ಡಾ. ಬಸಂತ ಸಾಗರ, ಕಾಳಮ್ಮ ಎಚ್.ಎಸ್, ಡಾ. ಮಹಮ್ಮದ್ ಆರಿಫ್ ಇನಾಮದಾರ್, ಡಾ. ಮಹಾದೇವಪ್ಪ, ಡಾ. ಮಹಿಬೂಬಅಲಿ ಸೌದಾಗರ್, ಡಾ. ದಯಾನಂದ ಕಾಂಬ್ಳೆ, ಅಧಿಕ್ಷಕರಾದ ಬುರಾನುದ್ಧೀನ್ ಹಾಗೂ ಉಪನ್ಯಾಸಕರಾದ ಅರ್ಜುನ್ ಕನ್ಯಾಕೋಳುರ, ಶ್ರೀಶೈಲ, ಡಾ. ದೇವಪ್ಪ ಹೊಸ್ಮನಿ, ರಾಜಶೇಖರ ದಿಗ್ಗಿ, ಪರಮಜ್ಯೋತಿ, ರೇಣುಕಾಸ್ವಾಮಿ, ಮರೆಪ್ಪ ಜಾಲಿಮಂಚಿ, ಡಾ. ಶರಣಪ್ಪ ಸಂಘರ್ಷ, ಸಿಬ್ಬಂದಿಗಳಾದ ಚಂದ್ರಕಲಾ, ಮಹಾಲಿಂಗ ಮುಂತಾದವರು ಉಪಸ್ಥಿತರಿದ್ದರು. ವಿವಿಧ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

About The Author