ಕರ್ನಾಟಕ ಅಹಿಂದ ಜನ ಸಂಘದ ಯುವ ಘಟಕದ ಮಹಿಳಾ ರಾಜ್ಯಧ್ಯಕ್ಷೆಯಾಗಿ ಚೈತ್ರ ಲಿಂಗರಾಜ ನೇಮಕ

ಬೆಂಗಳೂರು :- ಕರ್ನಾಟಕ ಅಹಿಂದ ಜನ ಸಂಘದ ಯುವ ಘಟಕದ ಮಹಿಳಾ ರಾಜ್ಯಧ್ಯಕ್ಷೆಯಾಗಿ ಚೈತ್ರ ಲಿಂಗರಾಜ್ ರವರನ್ನು ನೇಮಕ ಮಾಡಲಾಗಿದೆ.ಅಹಿಂದ ಜನ ಸಂಘದ ಸಂಸ್ಥಾಪ ಕರು ಮತ್ತು ರಾಜ್ಯಧ್ಯಕ್ಷರಾಗಿರುವ ಅಯ್ಯಪ್ಪಗೌಡ ಅವರು ಚೈತ್ರ ಲಿಂಗರಾಜ್ ಅವರನ್ನು ನೇಮಕ ಮಾಡಿ. ಅಹಿಂದ ಸಮುದಾಯದ ಜನರು ಸಾಮಾಜಿಕ ಶೈಕ್ಷಣಿಕ, ಆರ್ಥಿಕವಾಗಿ ಶ್ರೇಯೋ ಭಿವೃದ್ಧಿ ಹೊಂದಲು ಸಂಘಟನೆ ಮತ್ತು ಬಲವರ್ಧನೆಗಾಗಿ ಶ್ರಮಿಸಿ ಎಂದು ಹೇಳಿದ್ದಾರೆ.

ತಮ್ಮನೇಮಕದ ಬಗ್ಗೆ ಹರ್ಷ ವ್ಯಕ್ತಪ ಡಿಸಿರುವ ಚೈತ್ರ ಲಿಂಗರಾಜ್ ಅವರು ಅಹಿಂದ ಸಮುದಾಯದ ಜನರ ಸಹಕಾರದಿಂದ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.