ಬೃಂದಾವನ ಆಹಾರ ಉತ್ಪಾದನೆಗಳ ಘಟಕಕ್ಕೆ ಸಂಸದ ಜಿ ಕುಮಾರ ನಾಯಕರಿಂದ ಚಾಲನೆ

ರಾಯಚೂರು : ಇಂದು ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಚ್ಚಾಲಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ರಾಯಚೂರು ಅವರ ಆರ್ಥಿಕ ನೆರವು ಹಾಗೂ ಪೇಪಾಲ್ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶ್ರೀ ಬೃಂದಾವನ ಮಹಿಳಾ ಸ್ವಸಹಾಯ ಸಂಘ ಗ್ರಾಮೀಣ ಸಾಮಾಜಿಕ ಉತ್ಪಾದನೆ ಘಟಕವನ್ನು ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್ ಹಾಗೂ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಕುಮಾರ ನಾಯಕ ಅವರು ರಿಬ್ಬನ್ ಕತ್ತರಿಸುವ ಮೂಲಕ ಉತ್ಪಾದನೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಹಿಳೆಯರು ಸ್ವಾವಲಂಬಿಗಳಾಗಬೇಕು ಇಂತಹ ಸಹಕಾರಿ ಸಂಘಗಳ ಮೂಲಕ ಬದುಕನ್ನು ಕಟ್ಟಿಕೊಂಡು ಗ್ರಾಮೀಣ ಮಟ್ಟದಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುವಂತಹ ನಿಮ್ಮ ಕಾರ್ಯ ಶ್ಲಾಘನೀಯವಾದದ್ದು. ಇಂತಹ ಸಹಕಾರ ಸಂಘಗಳಿಗೆ ಸದಾ ನಮ್ಮ ಪ್ರೋತ್ಸಾಹವಿರುತ್ತದೆ ಎಂದು ಹೇಳಿದರು.

ಶಾಸಕರು ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ರವರು ನನ್ನ ಕ್ಷೇತ್ರದಲ್ಲಿ ಇಂತಹ ಸಹಕಾರಿ ಸಂಘ ಸ್ಥಾಪನೆಯಾಗಿತ್ತು. ವೈಯಕ್ತಿಕವಾಗಿ ನನಗೆ ಸಂತಸವನ್ನು ಉಂಟು ಮಾಡಿದೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಈ ಸಂಘಗಳಿಗೆ ಕಲ್ಪಿಸಿ ಮುಂದೆ ಇಂತಹ ಅನೇಕ ಸಂಸ್ಥೆಗಳನ್ನು ಹೆಚ್ಚಾಗಿ ಸ್ಥಾಪಿಸಿ ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಸರ್ಕಾರದ ವತಿಯಿಂದ ನನಗೆ ಪ್ರಯತ್ನವನ್ನು ಮಾಡುತ್ತೇನೆ ಎಂದು ಮಾತನಾಡಿದರು. ಸಂಘದ ನಿರ್ದೇಶಕರಾದ ಡಾ. ಡೆನ್ನಿಸ್ ಚೌಹಾಣ್, ವಿನಾಯಕ್ ಸಂಘದ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಸೇರಿದಂತೆ ಸ್ವ ಸಹಾಯ ಸಂಘದ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತಿಯ ಸದಸ್ಯರು ಗ್ರಾಮಸ್ಥರು ಇದ್ದರು.